ರಾಜ್ಯದ ಪ್ರಸಕ್ತ ವಿದ್ಯಮಾನಗಳ ಕುರಿತು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದ ಮಾಜಿ ಪ್ರಧಾನಿ ದೇವೇಗೌಡರು, ಹಲವು ವಿಚಾರಗಳನ್ನ ಹಂಚಿಕೊಂಡ್ರು. ಇದೇ ವೇಳೆ ನೈಸ್ ಹಗರಣ ಪ್ರಸ್ತಾಪ ಮಾಡಿದ ಅವರು, ಬೊಮ್ಮಾಯಿ ಸಿಎಂ ಆಗಿದ್ದಾಗ ಸದನ ಸಮಿತಿ ರಚನೆ ಮಾಡಿದ್ರು. ಸದನ ಸಮಿತಿ ವರದಿಯಲ್ಲಿ 11,668 ಎಕರೆ ಜಮೀನು ಸರ್ಕಾರಕ್ಕೆ ವಾಪಸ್ ಕೊಡುವಂತೆ ವರದಿ ನೀಡಿದೆ. ಯಾರ ಭೂಮಿ ಇದು ಅಂತ ಪ್ರಶ್ನೆ ಮಾಡಿದ ಅವರು, ಭೂಮಿ ವಾಪಸ್ ಪಡೆಯಲು ಸಿದ್ದರಾಮಯ್ಯಗೆ ಏನು ಕಷ್ಟ ಇದೆ. ಹೆಚ್ಚುವರಿ ಜಮೀನಿಗೆ ಕೋಟ್ಯಾಂತರ ರೂಪಾಯಿ ಸರ್ಕಾರಕ್ಕೆ ಆದಾಯ ಬರಲಿದ್ದು, ಇದರಲ್ಲಿ ಬರೋ ಹಣವನ್ನ ನಿಮ್ಮ ಐದು ಉಚಿತ ಕಾರ್ಯಕ್ರಮಕ್ಕೆ ಬಳಸಿಕೊಳ್ಳಿ. ಅಧಿಕಾರ ಇರುತ್ತೆ ಹೋಗುತ್ತೆ, ಆದ್ರೆ ಸಿದ್ದರಾಮಯ್ಯ ಅವರೇ ನೀವು ಮಾತಾಡೋ ಮಾತು ಹೃದಯದ ಅಂತರಾಳದಿಂದ ಬರಬೇಕು ಅಂತ ಆಕ್ರೋಶ ಹೊರಹಾಕಿದ್ರು.