ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಮಲ್ಲಮ್ಮ ಸಿದ್ರಾಮಪ್ಪ ವಳಕೇರಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ನಗರ ಶಿಶು ಅಭಿವೃದ್ಧಿ ಯೋಜನೆಯಿಂದ ಕಲಬುರಗಿಯ ಕನ್ನಡ ಸಾಹಿತ್ಯ ಸಂಘದಲ್ಲಿ ಏರ್ಪಡಿಸಲಾಗಿದ್ದ ಪೋಷಣ ಮಾಸ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗರ್ಭಿಣಿ ಆರೋಗ್ಯವಾಗಿದ್ದರೆ ಹುಟ್ಟುವ ಮಗು ಸದೃಢವಾಗಿರುತ್ತದೆ. ಕಾರಣ ಗರ್ಭಿಣಿಯರು ಸಮರ್ಪಕವಾಗಿ ಪೌಷ್ಠಿಕ ಆಹಾರವನ್ನು ಸ್ವೀಕರಿಸಬೇಕು. ಗರ್ಭಿಣಿಯರನ್ನು ಹಾಗೂ ಹುಟ್ಟುವ ಮಗುವನ್ನು ಆರೋಗ್ಯವಂತರನ್ನಾಗಿಸುವುದೇ ಪೋಷಣ ಮಾಸ ಕಾರ್ಯಕ್ರಮದ ಮುಖ್ಯ