ಬಿಸಿಲ ಬೇಗೆ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದ ಹಲವೆಡೆ ಭೂಕಂಪನದ ಅನುಭವವಾಗಿದೆ. ರಾಮನಗರ, ಕನಕಪುರ, ಚನ್ನಪಟ್ಟಣ, ಚಾಮರಾಜನಗರ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಸತ್ತೇಗಾಲದ ಸುತ್ತಮುತ್ತ ಭೂಮಿ ಕಂಪಿಸಿದೆ. ಮನೆಯ ಪಾತ್ರೆ ಸಾಮಾನುಗಳೂ ನೆಲಕ್ಕೆ ಬಿದ್ದಿವೆ.