ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಸಂಬಂಧ ಸಮಿತಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಓರ್ವ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರದ ಕೆಹೆಚ್ಬಿ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರು ಸಭೆ ಕರೆದಿದ್ದರು. ಸಭೆಯಲ್ಲಿ ಹಲವರು ಭಾಗವಹಿಸಿದ್ದರು. ಹಬ್ಬದ ವಿಷಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆದಿದೆ.