ನವದೆಹಲಿ: ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಫೈನಲ್ ಮಾಡುವುದರಲ್ಲಿ ಬ್ಯುಸಿಯಾಗಿರುವಾಗಲೇ ಕೇಂದ್ರ ಚುನಾವಣಾ ಆಯೋಗ ಹೊಸ ತಗಾದೆ ತೆಗೆದಿದೆ.ಒಬ್ಬನೇ ಅಭ್ಯರ್ಥಿ ಎರಡು ಕಡೆ ಸ್ಪರ್ಧಿಸುವುದಕ್ಕೆ ಕೇಂದ್ರ ಚುನಾವಣಾ ಆಯೋಗ ತಕರಾರರು ತೆಗೆದಿದ್ದು, ಸುಪ್ರೀಂ ಕೋರ್ಟ್ ಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸಿದೆ. ಇದರಂತೆ ಒಬ್ಬನೇ ಸ್ಪರ್ಧಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಯೋಗ ಹೇಳಿದೆ.ಆದರೆ ಕರ್ನಾಟಕ ಚುನಾವಣೆಗೆ ಇದು ಪರಿಣಾಮ ಬೀರದು.