ನಿನ್ನೆ ರಾತ್ರಿ ನನಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿನ್ನೆ ರಾತ್ರಿ ನಾನು ಮೊಬೈಲ್ ಸೈಲೆಂಟ್ ಮಾಡಿ ಮಲಗಿದ್ದೆ. ನನಗೆ ಮಿಸ್ಡ್ ಕಾಲ್ ಬಂದಿದೆ. ಕಜಕಿಸ್ತಾನದಿಂದ ವಾಟ್ಸಪ್ ಕಾಲ್ ಬಂದಿದೆ ಎಂದು ತಿಳಿಸಿದ್ರು. ಇದು ಹೇಡಿಗಳು ಮಾಡುವ ಕೆಲಸ. ಈ ಸಂಬಂಧ ನಾನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡುತ್ತಿದ್ದೇನೆ. ಜೈಲಿನಲ್ಲಿರುವಂತಹ ವ್ಯಕ್ತಿಯ ಡೈರಿಯಲ್ಲಿ ನನ್ನ ಹೆಸರು ಉಲ್ಲೇಖವಾಗಿತ್ತು.