ಪೊಲೀಸ್ ಹಾಗೂ ಅಧಿಕಾರಿಗಳ ಮೇಲೆ ಸೇವಾ ನಿರ್ಲಕ್ಷ್ಯ, ಅಪರಾಧ ಚಟುವಟಿಕೆ, ಅಕ್ರಮ ದಂಗೆ ತಡೆಯಲು ವಿಫಲವಾದವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದು ಕೆಲವು ಪೊಲೀಸ್ ಅಧಿಕಾರಿಗಳ ನಿದ್ದೆಗೆಡಿಸಿದೆ. ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಅಪರಾಧ ಚಟುವಟಿಕೆ ಹಾಗೂ ಅಕ್ರಮ ದಂಗೆಗಳನ್ನು ತಡೆಗಟ್ಟಲು ಅಧಿಕಾರಿಗಳ ಮೇಲೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದ ಹಿರಿಯ ಅಧಿಕಾರಿಯೊಬ್ಬರು ಹೆದರಿ ಸ್ವಯಂ ನಿವೃತ್ತಿ ಪಡೆಯಲು ಚಡಪಡಿಸುತ್ತಿದ್ದಾರೆ ಎಂಬ ಮಾತುಗಳು ಹೇಳಿ ಬರುತ್ತಿವೆ.ಇನ್ನು