ತಟ್ಟೆ ಕಾಸಿಗಾಗಿ ಪೂಜಾರಿಗಳು ಹೊಡೆದಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ನಡೆದಿದೆ. ಯಂತ್ರ ಹಾಗೂ ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿ ದೃಶ್ಯ ವೈರಲ್ ಆಗಿದೆ. ಘಟನೆ ಎರಡು ಮೂರು ದಿನದ ಹಿಂದೆ ನಡೆದಿದ್ದು, ವೀಡಿಯೋ ವೈರಲ್ಲಾದ ಬಳಿಕ ಹೊಡೆದಾಟ ಬೆಳಕಿಗೆ ಬಂದಿದೆ. ಭಾನುವಾರ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಶ್ರೀ