ನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೊನೆಗೂ ಈಶ್ವರಪ್ಪಗೆ ಗೋಷ್ಠಿ ನಿಗದಿ ಮಾಡಲಾಗಿದೆ. ನಿನ್ನೆ ಬಿಡಗಡೆಗೊಳಿಸಲಾದ ಗೋಷ್ಠಿ ನಿರ್ಣಯ ಪಟ್ಟಿಯಲ್ಲಿ ಈಶ್ವರಪ್ಪ ಹೆಸರಿಗೆ ಕೊಕ್ ನೀಡಲಾಗಿತ್ತು. ಆದರೆ, ಇಂದು ಈಶ್ವರಪ್ಪ ಕಾರ್ಯಕಾರಿಣಿಗೆ ಹಾಜರಾದ ಹಿನ್ನೆಲೆಯಲ್ಲಿ ಅವರಿಗೆ ಗೋಷ್ಠಿ ನಿಗದಿಪಡಿಸಲಾಗಿದೆ. ಬರಗಾಲದ ಕುರಿತಂತೆ ನಾಳೆ ನಿರ್ಣಯ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಒಬ್ಬರನ್ನೊಬ್ಬರು ಆರೋಪ, ಪ್ರತ್ಯಾರೋಪಗಳಲ್ಲಿ