ಕೊಡಗು (ಸೆ. 13) : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜಂಬೂ ಸವಾರಿಗೆ ಆಯ್ಕೆ ಆಗಿದ್ದ ಕೊಡಗಿನ ಐದು ಆನೆಗಳಿಗೆ ಬೀಳ್ಕೊಡಲಾಗಿದೆ. ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರದಿಂದ ಮೂರು ಆನೆಗಳು ಆಯ್ಕೆ ಆಗಿದ್ದವು. ಪಟ್ಟದ ಆನೆ ವಿಕ್ರಮ ಮತ್ತು ಕಾವೇರಿ ಜೊತೆಗೆ ಧನಂಜಯ ಆನೆಗಳು ಆಯ್ಕೆಯಾಗಿದ್ದವು. ಇನ್ನು ವಿರಾಜಪೇಟೆ ತಾಲ್ಲೂಕಿನ ಮತ್ತಿಗೋಡು ಸಾಕಾನೆ ಶಿಬಿರದಿಂದ ಅಂಬಾರಿ ಹೊರಲಿರುವ ಅಭಿಮನ್ಯು ಆನೆ ಮತ್ತು ಗೋಪಾಲಸ್ವಾಮಿ ಆನೆಗಳು ಆಯ್ಕೆಯಾಗಿವೆ.