ಮಡಿಕೇರಿಯಲ್ಲಿ ಬಿಟ್ಟು ಬಿಡದೇ ಮಳೆ ಆಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ಒಳ ಹರಿವು ಕಡಿಮೆ ಆಗದ ಕಾರಣ ನದಿಗೆ ನಿರಂತರವಾಗಿ ನೀರು ಬಿಡಲಾಗುತ್ತಿದೆ. ಇದೀಗ ಕಾವೇರಿ ಕೊಳ್ಳದಲ್ಲಿ ಪ್ರವಾಹದ ಭೀತಿ ಮತ್ತಷ್ಟು ಹೆಚ್ಚಾಗಿದೆ.ಒಂದೆಡೆ ಮಡಿಕೇರಿಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ 1.30 ಲಕ್ಷ ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದೆ. ನಿನ್ನೆ 1.15 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ