ರಾಜ್ಯ ವಿಧಾನಸಭಾ ಚುನಾವಣೆಗೆ ಕೇಸರಿ ಪಡೆಯ ನಾಯಕರು ಸಕಲ ಸಿದ್ದತೆ ನಡೆಸ್ತಿದ್ದಾರೆ. ಒಂದು ಕಡೆ ಹೈಕಮಾಂಡ್ ನಾಯಕರ ಸಾಲು ಸಾಲು ಭೇಟಿ ನೀಡಿ ಒಂದು ಸುತ್ತಿನ ಪ್ರಚಾರವನ್ನ ಮುಗಿಸಿಕೊಂಡಿದ್ದಾರೆ. ಚುನಾವಣೆಗೆ ಮಹೂರ್ತ ಫಿಕ್ಸ್ ಆದ ನಂತ್ರ ಕ್ಷೇತ್ರಗಳ ಪ್ರಚಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅಖಾಡಕ್ಕಿಳಿಯಲು ರೆಡಿಯಾಗಿದ್ದಾರೆ. ಚುನಾವಣೆ ಸಿದ್ದತೆಗಳ ಬಗ್ಗೆ ಇಂದು ಬಿಎಸ್ ವೈ ಮಾಹಿತಿ ನೀಡಿದ್ರು ಜೊತೆಗೆ ಪುತ್ರ ವಿಜಯೇಂದ್ರ ಸ್ಪರ್ದೆ ಎಲ್ಲಿಂದ ಮಾಡ್ತಾರೆ ಅನ್ನೋ ಮಾಹಿತಿಯನ್ನ ನೀಡಿದ್ರು.ರಾಜ್ಯ