ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಯು ಇದೀಗ ರುದ್ರತಾಂಡವವಾಡುತ್ತಿದ್ದಾಳೆ.ಕಳೆದೆರಡು ತಿಂಗಳ ಹಿಂದೆ ಸಂಪೂರ್ಣ ಬತ್ತಿದ ಕೃಷ್ಣಾ ನದಿ ಇದೀಗ 50ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾಲಿಟ್ಟಿದ್ದಾಳೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿಯ ಎಂಟು ತಾಲ್ಲೂಕುಗಳು ಸಂಪೂರ್ಣ ಜಲಾವೃತವಾಗಿವೆ. 50 ಕ್ಕೂ ಹೆಚ್ಚಿನ ಹಳ್ಳಿಗಳು ನಡುಗಡ್ಡೆಯಂತಾಗಿವೆ.ಜಿಲ್ಲಾಡಳಿತ ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸಿದ್ದು ಅಪಾರ ಪ್ರಮಾಣದ ಜನ ಜಾನುವಾರಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಡಲಾಗುತ್ತಿದೆ.ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನಾಲ್ಕು ಲಕ್ಷ