ಬೆಂಗಳೂರು (ಆ.05): ಒಬಿಸಿ ಮಾನ್ಯತೆ ನೀಡುವ ಅಧಿಕಾರ ರಾಜ್ಯಕ್ಕೆ ದೊರೆತಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯಗಳ ಒಳ ಪಂಗಡಗಳು ಸೇರಿದಂತೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರುವ ಆಗ್ರಹ ಮಂಡಿಸುತ್ತಿರುವ ಹಲವು ಜಾತಿಗಳ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ. ಪಂಚಮಸಾಲಿ ಸೇರಿದಂತೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳ ವಿವಿಧ ಒಳಪಂಗಡಗಳು ಸೇರಿದಂತೆ ಹಲವು ಸಮುದಾಯಗಳು ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ತೀವ್ರವಾಗಿ