ತನ್ವೀರ್ ಸೇಟ್ ಪತ್ರದ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಖಂಡನೆ ವ್ಯಕ್ತಪಡಿಸಿದ್ದಾರೆ.ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ಬಹಳ ಗಂಭೀರ ಆಗಿವೆ.ಪೊಲೀಸ್ ಠಾಣೆ ಸುಟ್ಡಿದ್ದಾರೆ, ಶಾಸಕನ ಮನೆ ಸುಟ್ಟಿದ್ದಾರೆ.ಇಂಥ ಕೇಸ್ ಗಳನ್ನು ವಾಪಸ್ ಪಡೆಯಲು ಹೋಗ್ತಿರೋದು ಸರಿಯಲ್ಲ.ಇವರೆಲ್ಲ ರಾಜ್ಯದ ವಿರುದ್ಧ ದಂಗೆ ಎದ್ದವರು ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ. ಅಲ್ಲದೇ ಇಂಥ ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು.ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು.ಹೊರದೇಶಗಳ ಶಕ್ತಿಗಳ ಕುಮ್ಮಕ್ಕಿನಿಂದ