ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಪರಿವಾರ ಮತ್ತು ಬಿಜೆಪಿ ನಡುವೆ ಒಳಒಪ್ಪಂದವಿದೆ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಕಲ್ಲಡ್ಕ ಪ್ರಭಾಕರ್ ವಿರುದ್ಧವಾಗಲಿ, ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಜಗದೀಶ್ ಕಾರಂತ ವಿರುದ್ಧವಾಗಲಿ ಸರಕಾರ ಯಾವ ಕ್ರಮ ಕೈಗೊಂಡಿದೆ? ಇದನ್ನು ನೋಡಿದಲ್ಲಿ ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಅನ್ನಿಸುವುದರಲ್ಲಿ ಯಾವುದೇ