ಬೆಂಗಳೂರು (ಜುಲೈ 03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಡೀನೋಟಿಫಿಕೇಶನ್ ಭೂತ ಮುತ್ತಿಕೊಂಡಿದೆ. ಬೆಳ್ಳಂದೂರು ಡೀನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ವಾಸುದೇವ ರೆಡ್ಡಿ ಎಂಬುವರು ಸಲ್ಲಿಸಿದ ದೂರನ್ನು ಪರಿಗಣಿಸಿ ವಿಶೇಷ ಕೋರ್ಟ್ ಈ ನಿರ್ಧಾರಕ್ಕೆ ಬಂದಿದೆ. ಲೋಕಾಯುಕ್ತ ಪೊಲೀಸರು ಈ ಹಿಂದೆ ಈ ಪ್ರಕರಣದಲ್ಲಿ ಬಿ ರಿಪೋರ್ಟ್ ನೀಡಿದ್ದರು. ಇದರಿಂದ ಯಡಿಯೂರಪ್ಪ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಆದರೆ, ಇದೀಗ ಜನಪ್ರತಿನಿಧಿಗಳ ವಿಶೇಷ