ಬೆಂಗಳೂರು: ಕುಮಾರಸ್ವಾಮಿಗೆ ಎರಡೆರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ದಿನಕ್ಕೆ 10 ಗಂಟೆ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ. ಹಾಗಿದ್ದರೂ ದಲಿತರ ಸಮಸ್ಯೆ ಆಲಿಸಲು ಅವರ ಗುಡಿಸಲುಗಳಿಗೆ ಭೇಟಿ ಕೊಡ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಪುತ್ರನ ಗುಣಗಾನ ಮಾಡಿದ್ದಾರೆ. ಕೆಆರ್ ಪುರಂನ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ, ಕುಮಾರಸ್ವಾಮಿ ವಿಶ್ರಾಂತಿ ಅಗತ್ಯವಿದ್ದರೂ, ರಾಜ್ಯಾದ್ಯಂತ ಪ್ರವಾಸ ಮಾಡಲು ಪ್ರಾರಂಭಿಸಿದ್ದಾರೆ. ದಲಿತರ ಕಷ್ಟಕ್ಕೆ ಸ್ಪಂದಿಸಲು ಹಂಬಲಿಸುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು.ಇದೇ ವೇಳೆ