ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಸಹಕಾರ ಕೊಡುವುದಾಗಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಗೆ ಆಫರ್ ಕೊಟ್ಟಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಗೆ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಬೇಕಾದ 50 ಸದಸ್ಯರ ಬಲವಿಲ್ಲ. ಕೇವಲ 37 ಸದಸ್ಯರ ಬೆಂಬಲವಿದೆ. ಹೀಗಾಗಿ ಕಾಂಗ್ರೆಸ್ ತನ್ನ 2 ಅಭ್ಯರ್ಥಿಯನ್ನು ಗೆಲ್ಲಿಸಿ