ಕೋಲಾರ :ತಮ್ಮ ಏಕವಚನದಲ್ಲಿ ಡಿ.ಕೆ ಶಿವಕುಮಾರ್ ಹರಿಹಾಯ್ದಿರುವ ಕುರಿತು ಪ್ರತಿಕ್ರಿಯಿಸಿದ ಎಚ್ಡಿಕೆ, ಡಿಕೆಶಿ ಈಗ ಸಂಪೂರ್ಣವಾಗಿ ತಮ್ಮ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಕುಮಾರಸ್ವಾಮಿ ಸದಾ ಡಬ್ಬದಲ್ಲಿ ರೀಲು ಇದೆ ಎಂದು ಸುಳ್ಳು ಹೇಳುತ್ತಾರೆ. ಆ ರೀಲು ಹೊರಬಿಡುವುದೇ ಇಲ್ಲ ಎಂದು ಡಿಕೆ ಸೋದರರು ಮಾಡಿರುವ ಟೀಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೊಡ್ಡಾಲಳ್ಳಿ, ಕೋಡಳ್ಳಿ ಮುಂತಾದೆಡೆ ಡಿ.ಕೆ. ಶಿವಕುಮಾರ್ ಟೆಂಟ್ ಗಳಲ್ಲಿ ತೋರಿಸಿದ ರೀಲನ್ನು ನಾವು ಯಾವತ್ತೂ ತೋರಿಸಿಲ್ಲ ಎಂದು ಪರೋಕ್ಷವಾಗಿ ಬ್ಲೂಫಿಲಂ ದಂಧೆಯ ಆರೋಪವನ್ನು ಕೆದಕಿದ್ದಾರೆ.