ಬೆಂಗಳೂರು : ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದ ಸೋಮಣ್ಣ ಅವರ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ ಎನ್ನಲಾಗಿತ್ತಷ್ಟೇ ಅಲ್ಲದೇ ಹಲವು ಬಾರಿ ಕಾಂಗ್ರೆಸ್ ಮುಖಂಡರೊಡನೆ ಸೋಮಣ್ಣ ವೇದಿಕೆ ಹಂಚಿಕೊಂಡಿದ್ದರು. ಜೊತೆಗೆ ಕಾಂಗ್ರೆಸ್ ಸೇರ್ಪಡೆಯ ಸುಳಿವೂ ಸಹ ನೀಡಿದ್ದರು. ಆದರೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಎಚ್ಡಿಕೆ ಅವರನ್ನು ಭೇಟಿಯಾದ ಸೋಮಣ್ಣ ಇದೊಂದು ಸೌಹಾರ್ದಯುತ ಭೇಟಿ ಎಂದಿದ್ದಾರೆ.