ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ಅಮ್ಮನಪುರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬೋರಯ್ಯ ಎಂಬ ವ್ಯಕ್ತಿಯು ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಭದ್ರಮ್ಮನನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ 2014ರಲ್ಲಿ ತನ್ನ ಮೊದಲ ಪತ್ನಿ ಬಸಮ್ಮನನ್ನು ಕೊಲೆ ಮಾಡಿ ಜೈಲು ಪಾಲಾಗಿದ್ದ. ನಂತರ ಜಾಮೀನಿನ ಮೇಲೆ ಹೊರಬಂದು ಭದ್ರಮ್ಮನನ್ನು ವಿವಾಹವಾಗಿದ್ದ. ಆದರೆ ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಎರಡನೇ ಪತ್ನಿಯನ್ನು