ಬೆಂಗಳೂರು: ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ತಮ್ಮನ್ನು ಭೇಟಿಯಾಗಿ ಸಲ್ಲಿಸಿದ ದೂರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದು ತನಿಖೆಗೆ ಸೂಚಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಮಿತಿಮೀರುತ್ತಿದೆ. ಯುವ ಜನ ಡ್ರಗ್ ವ್ಯಸನಕ್ಕೆ ಹಾಳಾಗುತ್ತಿದ್ದಾರೆ. ಇದರ ವಿರುದ್ಧ ಕ್ರಮ ಕೈಗೊಳ್ಳಲು ಗೃಹಸಚಿವರಿಗೆ ಮನವಿ ಮಾಡುತ್ತೇನೆ ಎಂದು ಮಾಧ್ಯಮಗಳಿಗೆ ನೀಡಿದ ಸುತ್ತೋಲೆಯಲ್ಲಿ ಇಂದ್ರಜಿತ್ ಹೇಳಿದ್ದರು.ಇದಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್