ಸರಕಾರ ವಿದ್ಯಾರ್ಥಿಗಳಿಗಾಗಿ ಏನೆಲ್ಲ ಅನುಕೂಲತೆಗಳನ್ನು ಮಾಡಿಕೊಡುತ್ತದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಆ ಅನುಕೂಲತೆಗಳು ಯಾವ ರೀತಿ ಹಳ್ಳ ಹಿಡಿಯುತ್ತವೆ ಅನ್ನೋದಕ್ಕೆ ಸಾಕ್ಷಿ ಸಾಕಷ್ಟಿವೆ.ಗದಗ ನಗರದ ಕಳಸಾಪೂರ ರಸ್ತೆ ಬಳಿ ಇರುವ ಮೆಟ್ರಿಕ್ ನಂತರದ ಎಸ್ ಸಿ, ಎಸ್ ಟಿ ವಸತಿ ನಿಲಯದಲ್ಲಿ ತರಕಾರಿ, ಬೆಳೆ, ಅಕ್ಕಿ ಹೀಗೆ ಎಲ್ಲ ಧವಸ ಧಾನ್ಯಗಳಿಗೂ ಅನುದಾನ ಇರುತ್ತೆ. ಆದರೆ ಇಲ್ಲಿ ಆ ಅನುದಾನ ಅಧಿಕಾರಿಗಳ ಹಾಗೂ ಅಲ್ಲಿಯ ಸಿಬ್ಬಂದಿಗಳ ಜೇಬಿ ಸೇರ್ತಿದೆ ಅನ್ನೋದರಲ್ಲಿ