ಮನೆಗೆ ಬಂದು ಜಗಳವಾಡಿದಳೆಂದು ಗೃಹಿಣಿಯನ್ನು ಪ್ರಿಯಕರನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಮಾರುತಿ ಬಡಾವಣೆಯ ಜ್ಯೋತಿ (29) ಅವರು ಕೊಲೆಯಾಗಿರುವ ಗೃಹಿಣಿಯಾಗಿದ್ದು, ಇವರಿಗೆ ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಆರೋಪಿ ಪ್ರವೀಣ ಜೊತೆ ಒಂದು ವರ್ಷದಿಂದ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಪ್ರವೀಣ ಮನೆಗೆ ಹೋಗಿ ಜ್ಯೋತಿ ಜಗಳವಾಡಿದ್ದಳು. ಇದರಿಂದ ಕುಪಿತನಾಗಿದ್ದ ಆರೋಪಿ ಜ್ಯೋತಿ ಮನೆಗೆ ನುಗ್ಗಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾನೆ. ಹುಣಸೂರು