ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹಿನ್ನಲೆ ಇಂದು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬರೋಬರಿ 35 ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರಿನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ನ್ಯಾ.ಗೋಪಾಲಗೌಡ ಭಾಗಿಯಾಗುತ್ತಾರೆ ಎನ್ನಲಾಗಿದೆ. ಇಂದು ಕೇವಲ 2 ಗಂಟೆಗಳ ಕಾಲ ಮಾತ್ರ ಈ ಸಮಾವೇಶ ನಡೆಯಲಿದ್ದು, ಯಾವುದೇ ಪ್ರತಿಭಟನೆ, ರ್ಯಾಲಿ ಇರುವುದಿಲ್ಲ ಎಂದು ಸಮಾವೇಶದ ಆಯೋಜಕರು ತಿಳಿಸಿದ್ದಾರೆ.