ಒಂದು ಲಕ್ಷ ಜನರಿಗೆ ಒಂದರಂತೆ ಇಂದಿರಾ ಕ್ಯಾಂಟಿನ್ ಆರಂಭಿಸಲಾಗುವುದು. ಹಸಿವು ಮುಕ್ತ ರಾಜ್ಯವೇ ನಮ್ಮ ಸರಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ 12 ಲಕ್ಷ ಜನರಿರುವುದರಿಂದ 12 ಇಂದಿರಾ ಕ್ಯಾಂಟಿನ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಇಂದಿರಾ ಕ್ಯಾಂಟಿನ್ ಜನಪ್ರಿಯತೆ ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ವಿಪಕ್ಷಗಳಿಗೆ ಬಡವರ ಹಸಿವು ನೀಗಿಸುವುದು ಬೇಕಾಗಿಲ್ಲ. ಕೇವಲ ರಾಜಕೀಯ ಮಾಡುವುದೇ ಅವರ ಕಾಯಕವಾಗಿದೆ