ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ. ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದಿದೆ. ಇದು ನನಗೆ ಹಾಗೂ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ