ಕುಮಾರ್ ಬಂಗಾರಪ್ಪ ವಿರುದ್ಧ ದ್ವೇಷ ಸಾಧಿಸಿ ನಾನೇನ್ ಅವನ ಆಸ್ತಿ ಕಿತ್ತುಕೊಳ್ಳಬೇಕೇ ಎಂದು ಸಚಿವ ಕಾಗೋಡು ತಿಮ್ಮಪ್ಪ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಮಾಡಲು ಚೆನ್ನಾಗಿ ದುಡಿಯಬೇಕು. ಜನರ ಒಲವು ಗಳಿಸಿಕೊಳ್ಳಬೇಕು. ಅಂದಾಗ ಮಾತ್ರ ಉತ್ತಮ ರಾಜಕಾರಣಿಯಾಗಬಲ್ಲ ಎಂದು ಸಲಹೆ ನೀಡಿದ್ದಾರೆ. ಕುಮಾರ ಬಂಗಾರಪ್ಪ ಬಗ್ಗೆ ಅವರಪ್ಪ ಸರಿಯಾಗಿ ಹೇಳಿದ್ದ. ಮನೆಯಿಂದ ತಂದೆ ತಾಯಿಯನ್ನು ಹೊರಹಾಕಿದವರು ಯಾರು? ಕುಮಾರ್ ಬಂಗಾರಪ್ಪ ಬೆಳವಣಿಗೆ ತಡೆಯಲು ನಾನ್ಯಾರು?