5 ಬಾರಿ ಗೆದ್ದಿರುವ ನನ್ನ ಊರು, ತಾಲೂಕು ಹಾಗೂ ನನ್ನ ಕ್ಷೇತ್ರದ ಜನರೇ ನನ್ನನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಸಿದರು. ಮತ್ತೊಂದು ಚುನಾವಣೆ ಬರುತ್ತಿದ್ದರೂ ಆ ಸೋಲು ಮರೆಯಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನೆನಪಿಸಿಕೊಂಡರು. ಬಾದಾಮಿಯಲ್ಲಿ ಮಂಗಳವಾರ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾದಾಮಿ ಜನ ಒಳ್ಳೆಯ ಜನ ಅಂತ ಇಲ್ಲಿ ನಿಂತುಕೊಂಡೆ, ನೀವು ನನ್ನನ್ನು ಗೆಲ್ಲಿಸಿದ್ದೀರಿ. ನಿಮ್ಮ ಋಣ ತೀರಸಬೇಕಲ್ಲ ಎಂದರು.