ಬೆಂಗಳೂರು(ಆ.16): ನಾನು ಸಿಎಂ ಆಗಿದ್ದರೆ ಲಾಕ್ಡೌನ್ ವೇಳೆ 10ಸಾವಿರ ಕೊಡುತ್ತಿದ್ದೆ. ಯಡಿಯೂರಪ್ಪ ಹಾಗೂ ಅವರ ಮಗ ಲೂಟಿ ಹೊಡೆದರು. ಆದ್ರೆ ಕಣ್ಣೀರಿನಲ್ಲಿ ಕೈತೊಳೆಯುವ ಜನರಿಗೆ ಹಣ ಕೊಡಲಿಲ್ಲ. ಕೆಲಸವಿಲ್ಲದೆ ಪರದಾಡುವ ಜನರಿಗೆ ಸಹಾಯ ಮಾಡಲಿಲ್ಲ ಎಂದು ವಿಜಯನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿದ್ದಾರೆ. ಅವನ್ಯಾವನೋ ಸಿ.ಟಿ.ರವಿ ಅಂತ ಇದ್ದಾನೆ. ಅವನಿಗೆ ಮನುಷ್ಯತ್ವವೂ ಇಲ್ಲ. ಬಡವರ ಬಗ್ಗೆಯೂ ಗೊತ್ತಿಲ್ಲ ಅನ್ನಪೂರ್ಣೇಶ್ವರಿ ಹೆಸರು ಇಡಬೇಕು