ಮಂಡ್ಯ : ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ ಡ್ಯಾಂನಿಂದ ನೀರು ಬಿಡಲಾಗುತ್ತಿದೆ. ಇತ್ತ ರೈತರ ಬೆಳೆಗೆ ನೀರು ಬಿಡಬೇಕಾ ಬಿಡಬಾರದಾ ಎಂಬುದರ ಕುರಿತು ಸೋಮವಾರ ಮಹತ್ವದ ಸಭೆ ನಡೆಯಲಿದೆ. ರೈತನ ಬದುಕು ಮಾನ್ಸೂನ್ನೊಂದಿಗಿನ ಜೂಜಾಟ ಎಂಬ ಮಾತು ಇದೆ. ಈ ಮಾತಿನಂತೆ ಮಂಡ್ಯ ಜಿಲ್ಲೆಯ ರೈತರ ಕೃಷಿಯ ಬದುಕು ಸದ್ಯ