ಅಷಾಡ ಮಾಸದ ಕಾರಣಕ್ಕೆ ಮದುವೆ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾದ ಕಾರಣ ತರಕಾರಿ ಬೆಲೆಯಲ್ಲಿ ತುಸು ಇಳಿಕೆ ಕಂಡಿದ್ದು, ಗ್ರಾಹಕರಿಗೆ ಕೊಂಚ ಸಮಾಧಾನ ತಂದಿದೆ. ರೈತರಿಗೆ ಉತ್ಪಾದನಾ ಬೆಲೆಯು ಸಿಗದಂತಾಗಿದೆ. ಬೀನ್ಸ್, ಟೊಮೆಟೋ, ಕ್ಯಾರೆಟ್ ಮತ್ತು ಹಸಿ ಮೆಣಸಿನಕಾಯಿಯ ಬೆಲೆ ಗಗನಕ್ಕೇರಿದ್ದವು. ಬೆಂಗಳೂರು ನಗರಕ್ಕೆ ಹಣ್ಣು ತರಕಾರಿ ಪೂರೈಕೆ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಉತ್ತಮ ಫಸಲು