ನಾಪತ್ತೆಯಾಗಿರುವ ಮೀನುಗಾರರನ್ನು ಹುಡುಕುವಂತೆ ಹಾಗೂ ಪತ್ತೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆಗಳು ಮುಂದುವರಿದಿವೆ. ಮಲ್ಪೆಯಲ್ಲಿ ನಾಪತ್ತೆಯಾಗಿರುವ ಏಳು ಜನ ಮೀನುಗಾರರನ್ನು ಪತ್ತೆ ಮಾಡಿಕೊಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಗಂಗಾ ಮತಸ್ಥರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಸತೀಶ್, ಹರೀಶ್, ರಮೇಶ್, ಸಾಮೋದರ್, ಚಂದ್ರಶೇಖರ್, ರವಿ, ಲಕ್ಷ್ಮಣ್ ಎಂಬವರು ನೋಂದಣಿ ಸಂಖ್ಯೆ IND-KA-02MM4632 ಸಂಖ್ಯೆಯ ಸುವರ್ಣ ತ್ರಿಭುಜ ಎಂಬ ಹೆಸರಿನ ಬೋಟಿನಲ್ಲಿ ಮೀನುಗಾರಿಕೆಗೆ