ಬೆಂಗಳೂರು : ಕೇಂದ್ರ ಸರ್ಕಾರದ ಯೋಜನೆ ಆರಂಭದಲ್ಲಿಯೇ ಎಡವಿ ಬಿದ್ದಿದೆ. 60 ರೂ. ಗಳಿಗೆ ಭಾರತ್ ತೊಗರಿ ಬೇಳೆ ಹಾಗೂ 29 ರೂ. ಗಳಿಗೆ ಭಾರತ್ ಅಕ್ಕಿ ಪ್ರತಿ ಕೆಜಿಗೆ ದೊರೆಯುವುದೆಂದು ಕಾದಿದ್ದ ಗ್ರಾಹಕರಿಗೆ ಪೂರೈಕೆಯ ಅಭಾವದ ನಿರಾಸೆ ಉಂಟು ಮಾಡಿದೆ.ಬೆಂಗಳೂರು ಸೇರಿದಂತೆ ಹಲವೆಡೆ ಯೋಜನೆ ಉದ್ಘಾಟನಗೊಂಡ ದಿನ ಸಾಂಕೇತಿಕವಾಗಿ ನೀಡಲು 100 ಚೀಲಗಳನ್ನು ಪೂರೈಸಲಾಗಿತ್ತು. ಬಳಿಕ ಎಲ್ಲೂ ಸಹ ಭಾರತ್ ಅಕ್ಕಿ ಮತ್ತು ಭಾರತ್ ಬೇಳೆ ಕಾಣಿಸಿಕೊಂಡಿಲ್ಲ. ಸೂಪರ್ ಮಾರ್ಕೆಟ್ ಮತ್ತು ಇ-ಕಾಮರ್ಸ್ ಮುಖಾಂತರವೂ ಮಾರಾಟ ಮಾಡುವುದಲ್ಲದೇ