ಚಿತ್ರದುರ್ಗ(ಆ.14): ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾತ್ವಿಕವಾಗಿ ಇಂಥ ವಿಚಾರಕ್ಕೆ ಹೆಚ್ಚು ಮಹತ್ವ ಕೊಡಬೇಕಾಗಿಲ್ಲ. ಸಚಿವ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಉತ್ತರ ಹೇಳುವುದಾಗಿ ಹೇಳಿದ್ದಾರೆ. ಇದೇವೇಳೆ ಸರ್ಕಾರದ ಯೋಜನೆಗಳು ವ್ಯಕ್ತಿಗತವಾಗಿರಬಾರದು. ರಾಷ್ಟ್ರೀಯ ಯೋಜನೆಗಳ ಗುರುತು ಪಡೆದುಕೊಳ್ಳಬೇಕು. ನಮ್ಮ ಪ್ರಧಾನಿ ಅವರು ಪ್ರಧಾನ ಮಂತ್ರಿ ಆವಾಜ್ ಯೋಜನೆ ಸೇರಿ ಇತರೆ ಯೋಜನೆ ತಂದಿದ್ದಾರೆ.