ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ..ಸಿದ್ದರಾಮಯ್ಯ ಕಾರಿನ ಮೇಲೆ ಸಮಾಜಘಾತುಕ ಶಕ್ತಿಗಳು ಮೊಟ್ಟೆ ಎಸೆದಿವೆ..ಇದೊಂದು ಹೀನ ಕೃತ್ಯ ಇದನ್ನು ನಾನು ಖಂಡಿಸುತ್ತೇನೆ..ನೆರೆ ವಿವರವಾಗಿ ಸಿದ್ದರಾಮಯ್ಯ ಅಧ್ಯಯನ ಮಾಡಲು ಹೋಗಿದ್ರು..ಈ ವೇಳೆ ಸರ್ಕಾರದ ಪ್ರಾಯೋಜಕತ್ವದಲ್ಲಿ ಕೃತ್ಯ ನಡೆದಿದೆ.ಕಾಂಗ್ರೆಸ್ ನೋಡಿ ಬಿಜೆಪಿಗೆ ಭಯ ಬಂದಿದೆ..ಇದರಿಂದ ವಾಮ ಮಾರ್ಗದ ಮೂಲಕ ಕೆಲವರನ್ನು ಭಯ ಬೀಳಿಸುವ ಪ್ರಯತ್ನ ನಡೀತಿದೆ..ಬಿಜೆಪಿ ರೂಪಿಸುವ ಯಾವುದೇ ತಂತ್ರಕ್ಕೂ ಕಾಂಗ್ರೆಸ್ ಹೆದರಲ್ಲ.