ಬೆಂಗಳೂರು: ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ-ಕಾರ್ಯಾಚರಣೆ ಕುರಿತ ವರ್ಚುಯೆಲ್ ಆನ್ಲೈನ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು