ಬೆಂಗಳೂರು: ರಾಹುಲ್ ಗಾಂಧಿ ಬಿ ಟೀಂ ಟೀಕೆಯ ನಂತರ ಒಂದೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ಪರಸ್ಪರ ಕೆಸರೆರಚಾಟ ಮಾಡುತ್ತಿದ್ದರೆ ಇನ್ನೊಂದೆಡೆ ಇದೇ ಎರಡು ಪಕ್ಷಗಳು ಟಿಕೆಟ್ ಹಂಚಿಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘ ಮನವಿ ಮಾಡಿದೆ. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿದ ಸಂಘಟನೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಲು ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಬೇಕು. ಮತ ವಿಭಜನೆಯಾಗದಂತೆ ಪ್ಲ್ಯಾನ್ ಮಾಡಬೇಕು