ಬೆಂಗಳೂರು : ಸಿದ್ದರಾಮಯ್ಯ ಪಾಲಿಗೆ ಜೆಡಿಎಸ್ ಮೊದಲ ಶತ್ರು. ಆದ್ದರಿಂದ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಆಂಗ್ಲ ವೆಬ್ ಸೈಟ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಪಾಲಿಗೆ ಬಿಜೆಪಿಗಿಂತಲೂ ಜೆಡಿಎಸ್ ದೊಡ್ಡ ಶತ್ರು. ನನ್ನ ನೇತೃತ್ವದ ಸರ್ಕಾರ ರಚನೆ ಬಗ್ಗೆ ಸಿದ್ದರಾಮಯ್ಯ ಗೆ ಮನಸಿರಲಿಲ್ಲ. ಪ್ರತಿದಿನ ಸಿದ್ದರಾಮಯ್ಯ ರಿಂದ ಸರ್ಕಾರ ಉರುಳಿಸುವ ಯತ್ನ ನಡೆಯುತ್ತಿತ್ತು. ಸಿದ್ದರಾಮಯ್ಯ