ಬೆಂಗಳೂರು: ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ನಗರದ ಮತದಾರರನ್ನು ಸೆಳೆಯುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದೆ.ಬಿಬಿಎಂಪಿಯಲ್ಲಿ ಕಾಂಗ್ರೆಸ್ ಆಡಳಿತ ವೈಫಲ್ಯ ತೋರಿಸಲು ಬಿಜೆಪಿ ತನ್ನ ಟ್ವಿಟರ್ ಪೇಜ್ ನಲ್ಲಿ ಬೆಂಗಳೂರಿನ ಕಸದ ಸಮಸ್ಯೆ, ರಸ್ತೆ ಗುಂಡಿಗಳನ್ನು ಫೋಟೋ ಸಮೇತ ಪ್ರಕಟಿಸಿ ತರಾಟೆಗೆ ತೆಗೆದುಕೊಳ್ಳಲು ಉದ್ದೇಶಿಸಿತ್ತು.ಆದರೆ ಅದೀಗ ಸ್ವತಃ ಬಿಜೆಪಿಗೆ ಮುಳುವಾಗಿದೆ. ಬೆಂಗಳೂರಿನ ಫೋಟೋ ಹಾಕುವ ಬದಲು ನೆರೆಯ ರಾಷ್ಟ್ರ ನೇಪಾಳದ ಕಠ್ಮಂಡು ನಗರದ ಫೋಟೋ, ಮಿಝೋರಾಂನ ರಸ್ತೆ ಗುಂಡಿಗಳ