ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದವನು. ಹುಬ್ಬಳ್ಳಿಯಲ್ಲಿ ನನಗೆ ದೊಡ್ಡ ಸ್ನೇಹಿತರ ಬಳಗವೇ ಇದೆ. ಇದು ನನಗೆ ಅತ್ಯಂತ ಪ್ರೀತಿಯ ಊರು. ಸಿಎಂ ಆಗಿ ಹುಬ್ಬಳ್ಳಿಗೆ ಬರುತ್ತೇನೆಂದು ಅಂದುಕೊಂಡಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರವಾಹ ಪರಿಸ್ಥಿತಿ ಅರಿಯಲು ಕಾರವಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿಗೆ ಗುರುವಾರ ಭೇಟಿ ನೀಡಿದ ನಂತರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ಮುಖ್ಯಮಂತ್ರಿ ಆದೆ ಎಂದು ಹೇಳಿಕೆ ನೀಡಿದ