ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರು ಎಂದಿಗೂ ಬಿಜೆಪಿಯಲ್ಲೇ ಇರುತ್ತಾರೆ. ಅವರು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ನಮ್ಮ ಸಹೋದರನಂತಿರುವ ಕೂಡ್ಲಿಗಿ ಶಾಸಕ ನಾಗೇಂದ್ರ ಅವರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದಿದ್ದಾರೆ. ನಾಗೇಂದ್ರ ಅವರನ್ನು ಸೆಳೆಯುವ ಮೂಲಕ ನಮ್ಮ ಮನೆಯನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್