ಬೆಂಗಳೂರು : ಆರ್ ಎಸ್ಎಸ್ ನಿಷೇಧಿಸಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಂಘಸಂಸ್ಥೆ ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ. ಒಂದು ಸಮುದಾಯದ ತುಷ್ಠೀಕರಣಕ್ಕೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಯಾರನ್ನು ತುಷ್ಠೀಕರಣ ಮಾಡ್ತಿದ್ದಾರೋ, ಅವರನ್ನೂ ಯಾಮಾರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಆರ್ ಎಸ್ಎಸ್, ಬಜರಂಗದಳ ನಿಷೇಧದ ಬಗ್ಗೆ ಸಿಎಂ ಅವರು ತಮ್ಮ ಅಭಿಪ್ರಾಯ, ನಿಲುವು ಸ್ಪಷ್ಟಪಡಿಸಲಿ. ಸಚಿವರ