ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಚೇತನರು ವಿಶಿಷ್ಟವಾಗಿ ಆಹ್ವಾನ ನೀಡುತ್ತಿದ್ದಾರೆ. ಅಕ್ಷರ ಜಾತ್ರೆ ಹಿನ್ನೆಲೆಯಲ್ಲಿ ನುಡಿ ಜಾತ್ರೆಗೆ ಆಗಮಿಸುವಂತೆ ಕಲಬುರಗಿ ನಗರದ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಿಂದ ಕೆ.ಕೆ.ಆರ್.ಡಿ.ಬಿ. ಕಚೇರಿ ವರೆಗೆ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಿದಲ್ಲದೆ ನುಡಿ ಹಬ್ಬಕ್ಕೆ ಬರುವಂತೆ ಕರೆ ನೀಡಿದರು.ಕೈಯಲ್ಲಿ ಕಟ್ಟಿಗೆ, ಪರಸ್ಪರ ಕೈ ಹಿಡಿದು ಶಿಕ್ಷಕರ ಸಹಾಯದಿಂದ ಸಾಲಾಗಿ ಜಾಥಾದಲ್ಲಿ ಭಾಗವಹಿಸಿದ ಮಕ್ಕಳು ನಮ್ಮೂರು ಕಲಬುರಗಿಗೆ