ಬೆಂಗಳೂರು: ನಿನ್ನೆ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅವರ ಸರಳ ಸಜ್ಜನಿಕೆಯಿಂದಾಗಿ ಇಂದು ಕೊನೆಯ ಬಾರಿಗೆ ಅವರ ದರ್ಶನ ಪಡೆಯಲು ಸಾವಿರಾರು ಮಂದಿ ಅಭಿಮಾನಿಗಳು ಮಾತ್ರವಲ್ಲದೆ, ಪಕ್ಷ ಬೇಧ ಮರೆತು ರಾಜಕೀಯ ನಾಯಕರೂ ಆಗಮಿಸುತ್ತಿದ್ದಾರೆ.