ಬೈಕ್ ಕಳ್ಳತನ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಬಂಧಿತನಾಗಿದ್ದ ಆರೋಪಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಲಾಕಪ್ ಡೆತ್ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಇಬ್ಬರು ಪೇದೆಗಳನ್ನ ಅಮಾನತು ಮಾಡಿದ್ದು, ಸಾವಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಪೋಷಕರು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ ಪರಿಣಾಮ, ಆರೋಪಿಯ ಶವ ಇನ್ನು ಕೂಡ ವಾರಸುದಾರರಿಗೆ ತಲುಪಿಲ್ಲ.