ದರೋಡೆಗೆ ಸಂಚು ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಆ ಯುವಕನ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡು ಓಡಾಡ್ತಿದ್ದ ಆತನನ್ನು ನಿನ್ನೆ ಸಂಜೆ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ರು. ಇನ್ನೇನು ಇಂದು ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಆದರೆ ಮುಂಜಾನೆ ಹೊತ್ತಿಗೆ ಪೊಲೀಸ್ ಠಾಣೆಯಲ್ಲೇ ಆತ ಸಾವನ್ನಪ್ಪಿದ್ದಾನೆ. ಈ ಪೋಟೋದಲ್ಲಿರುವ ಈ ಯುವಕನ ಹೆಸರು ವಿನೋದ್... 23 ವರ್ಷದ ಈತ ನಗರದ ಕಾಟನ್ ಪೇಟೆಯ ಜಾಲಿ ಮೊಹಲ್ಲಾ ನಿವಾಸಿ.