ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ. ಯಡಿಯೂರಪ್ಪ ನನ್ನನ್ನು ಸರಕಾರದ ಕಮಿಷನ್ ಏಜೆಂಟ್ ಎಂದು ಹೇಳಿಕೆ ನೀಡಿರುವುದು ನನಗೆ ತುಂಬಾ ಬೇಸರವಾಗಿದೆ. ವಕೀಲರೊಂದಿಗೆ ಚರ್ಚಿಸಿ ಮೊಕದ್ದಮೆ ಹೂಡುವ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಸರಕಾರದ ಕಮಿಷನ್ ಏಜೆಂಟ್ರಾಗಿ ಸಿಎಂ ಸಿದ್ದರಾಮಯ್ಯರಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದಾರೆ. ಮುಂಬರುವ ಚುನಾವಣೆಗಾಗಿ