ಬೆಂಗಳೂರು : ಬೋರ್ ವೆಲ್ ಗಳಿಂದ ಟ್ಯಾಂಕರ್ ಗಳನ್ನು ತುಂಬಿಸಿ ನೀರು ಪೂರೈಕೆ ಮಾಡುತ್ತಿರುವ ಎಲ್ಲಾ ಖಾಸಗಿ ಟ್ಯಾಂಕರ್ ಮಾಲಿಕರೂ ಸಹ ಇದಕ್ಕೆ ಪರವಾನಗಿ ಪಡೆಯಬೇಕು. ಆರ್ಟಿಓ ,ಸಂಚಾರ ಪೊಲೀಸ್ ಇಲಾಖೆ ಮತ್ತು ಜಲಮಂಡಳಿಯ ಅಧಿಕಾರಿಗಳಿಗೆ ಈ ಕುರಿತು ನಿರ್ದೇಶನ ನೀಡಲಾಗಿದೆ. ಎಲ್ಲಲ್ಲಿ ಕೊಳವೆ ಬಾವಿಗಳಿವೆ ಅವುಗಳನ್ನು ಗುರುತಿಸಿ ಅವುಗಳನ್ನು ಪರವಾನಗಿ ವ್ಯಾಪ್ಪಿಗೆ ಒಳಪಡಿಸಲಾಗುವುದು. ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಿಗೆ ಕುಡಿಯುವ ನೀರು ಪೂರೈಕೆಗೆ 10 ಕೋಟಿ ರೂ. ನೀಡಲಾಗಿದೆ ಎಂದರು. ಈ ಕುರಿತು ಸೋಮವಾರ ಮಧ್ಯಾಹ್ನ ಹಿರಿಯ ಅಧಿಕಾರಿಗಳ ಸಭೆ ಕರೆದಿರುವುದಾಗಿ ಡಿಕೆಶಿ ಹೇಳಿದರು.